<?xml version="1.0" encoding="UTF-8"?>
<mods xmlns:xsi="http://www.w3.org/2001/XMLSchema-instance" xmlns="http://www.loc.gov/mods/v3" version="3.1" xsi:schemaLocation="http://www.loc.gov/mods/v3 http://www.loc.gov/standards/mods/v3/mods-3-1.xsd">
  <titleInfo>
    <title>Ani aradala siri singara: bhutaradhaneya ani vaividhya bannagarike</title>
    <subTitle>ಆಣಿ ಅರದಳ ಸಿರಿ ಸಿಂಗಾರ: ಭೂತಾರಾಧನೆಯ ಅಣಿ ವೈವಿಧ್ಯ ಬಣ್ಣಗಾರಿಕೆ</subTitle>
  </titleInfo>
  <name type="personal">
    <namePart>RAO (H B L)</namePart>
    <namePart type="date">ರಾವ್ (ಎಚ್ ಬಿ ಎಲ್ )</namePart>
    <role>
      <roleTerm authority="marcrelator" type="text">creator</roleTerm>
    </role>
  </name>
  <name type="personal">
    <namePart>KUNDANTAYA (K L)</namePart>
    <namePart type="date">ಕುಂಡಂತಾಯ (ಕೆ ಎಲ್ )</namePart>
  </name>
  <typeOfResource>text</typeOfResource>
  <originInfo>
    <place>
      <placeTerm type="code" authority="marccountry">xu|</placeTerm>
    </place>
    <place>
      <placeTerm type="text">Mumbai</placeTerm>
    </place>
    <publisher>-</publisher>
    <dateIssued>2016</dateIssued>
    <issuance>monographic</issuance>
  </originInfo>
  <language>
    <languageTerm authority="iso639-2b" type="code">ng </languageTerm>
  </language>
  <language>
    <languageTerm authority="iso639-2b" type="code">Kan</languageTerm>
  </language>
  <language>
    <languageTerm authority="iso639-2b" type="code">nad</languageTerm>
  </language>
  <physicalDescription>
    <extent>xxiv,379</extent>
  </physicalDescription>
  <abstract>ಎಚ್ ಬಿ ಎಲ್ ರಾವ್ ಸಂಪಾದಿಸಿ ಪ್ರಕಟಿಸಿದ ಅಣಿ ಅರದಳ ಸಿರಿ ಸಿಂಗಾರ ಗ್ರಂಥಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡುವ 2016ನೇ ಸಾಲಿನ ಪುಸ್ತಕ ಸೊಗಸು ಪ್ರಶಸ್ತಿ ಬಂದಿದೆ. 
ಮುಂಬಯಿಯ ಸಾಹಿತ್ಯ ಬಳಗ ಪ್ರಕಟಿಸಿದ ” ಅಣಿ ಅರದಲ – ಸಿರಿ ಸಿಂಗಾರ ” ಗ್ರಂಥವು ಉಡುಪಿಯ ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರ , ಗೋವಿಂದ ಪೈ ಸಂಶೋಧನಾ ಕೇಂದ್ರ – ಕನ್ನಡ ಸಾಹಿತ್ಯ ಪರಿಷತ್ತಿನ ಮಹಾರಾಷ್ಟ್ರಘಟಕ, ಜಂಟಿಯಾಗಿ ಆಯೋಜಿಸಿದ್ದ ಭೂತಾರಾಧನೆಯ ಕೋಲ ,ನೇಮ ಮುಂತಾದ ಸಂದರ್ಭಗಳಲ್ಲಿ ವೈಭವದ ಸಂಕೇತವಾಗಿ ಬಳಸುವ ” ಅಣಿ “ಗಳ ನಿರ್ಮಾಣ ಮತ್ತು ಬಣ್ಣಗಾರಿಕೆಯ ಕುರಿತು ಮೂರು ದಿನ ನಡೆದ ಅಧ್ಯಯನ ಕಮ್ಮಟದ ಹುಟ್ಟುವಳಿಯನ್ನು ಪ್ರಧಾನವಾಗಿ ಇರಿಸಿಕೊಂಡು ಪ್ರಕಟವಾಗಿದೆ .

ಸುಮಾರು ಐವತ್ತು ಮಂದಿ ಕಲಾವಿದರು(ಪಂಬದರು ಮತ್ತು ಪಾಣರು), ವಿಷಯ ತಜ್ಞರು , ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ವೈ.ಎನ್. ಶೆಟ್ಟಿ , ಡಾ.ಅಶೋಕ ಆಳ್ವ , ಕೆ.ಎಲ್ ಕುಂಡಂತಾಯ ಅವರು ಕಲಾವಿದರ ತಂಡವನ್ನು ನಿರ್ಧರಿಸಿ ಕಮ್ಮಟವನ್ನು ನೇರ್ಪುಗೊಳಿಸಿದ್ದರು . ಎಂ .ಜಿ .ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು , ಲಚ್ಚೇಂದ್ರ ದಾಖಲೀಕರಣದ ಜವಾಬ್ದಾರಿವಹಿಸಿದ್ದರು .ಯಜ್ಞ , ಆಸ್ಟ್ರೋಮೋಹನ್ , ಹರ್ಷ ಅವರ ಫೋಟೋಗಳು ಗ್ರಂಥದಲ್ಲಿದೆ. 

ಪ್ರಧಾನ ಸಂಪಾದಕನಾಗಿ ಮತ್ತು ಪ್ರಕಾಶಕರಾದ ಸಾಹಿತ್ಯ ಬಳಗದ ಪರವಾಗಿ ಎಚ್. ಬಿ.ಎಲ್ .ರಾವ್ ಅವರು ಪ್ರಾರಂಭದಲ್ಲಿ  ”ಅಣಿ ಅರದಲ – ಸಿರಿ ಸಿಂಗಾರ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ .ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಮ್ಮಟವನ್ನು ಸಂಘಟಿಸಿದ್ದ ಹೆರಿಂಜೆ ಕೃಷ್ಣ ಭಟ್ಟ ಅವರು ‘ ಅಣಿ ಅರದಲ – ಸಿರಿ ಸಿಂಗಾರ : ಮೈದಾಳಿದ ವೈಭವ ‘ ಎಂದು ತಮ್ಮ ಅನಿಸಿಕೆಯನ್ನು ಬರೆದಿದ್ದಾರೆ.

ಈ ಅಧ್ಯಯನ ಕಮ್ಮಟವನ್ನು ಹಿರಿಯ ವಿದ್ವಾಂಸ ಏರ್ಯ ಲಕ್ಷೀನಾರಾಯಣ ಆಳ್ವ ಉದ್ಘಾಟಿಸಿದ್ದರು . ಡಾ.ಯು . ಪಿ.ಉಪಾಧ್ಯಾಯ ಉಪಸ್ಥಿತರಿದ್ದರು , ಡಾ . ವಿವೇಕ ರೈ ಅವರು ಸಮಾರೋಪ ಭಾಷಣ ಮಾಡಿದ್ದು ಮೂವರ ಭಾಷಣಗಳನ್ನೂ ಗ್ರಂಥದಲ್ಲಿ ದಾಖಲಿಸಿಕೊಳ್ಳಲಾಗಿದೆ .ಅಣಿ , ಅರದಲ , ಪದ್ದೆಯಿ ,ಸಿರಿಸಿಂಗಾರ , ಕಟಿಬಯಿರೂಪಗಳು ಈ ಐದು ವಿಭಾಗಗಳ 400 ಪುಟಗಳ ಈ ಗ್ರಂಥದಲ್ಲಿ 200ಪುಟಗಳಷ್ಟು ಬಣ್ಣದ ಪೋಟೊಗಳಿವೆ . ಅಣಿ ನಿರ್ಮಾಣದ ವಿವಿಧ ಹಂತಗಳು , ಬಣ್ಣಗಾರಿಕೆ , ಪ್ರಾಚೀನ – ಅರ್ವಾಚೀನ ಆಭರಣಗಳ ಚಿತ್ರಗಳು , ಕಮ್ಮಟದಲ್ಲಿ ಸಿದ್ಧಗೊಂಡ ವೇಷಗಳು ಹಾಗೂ ಕೊಡಿಯಡಿಯ ನೈಜ ವೇಷಗಳು ಎಂಬ ಐದು ವಿಭಾಗಗಳಲ್ಲಿ ಪೋಟೋಗಳಿವೆ .

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ , ಏರ್ಯ ಲಕ್ಷೀನಾರಾಯಣ ಆಳ್ವ , ಡಾ.ಯು .ಪಿ .ಉಪಾಧ್ಯಾಯ ,  ಪ್ರೊ ಅಮೃತ ಸೋಮೇಶ್ವರ , ಡಾ ಅಶೋಕ ಆಳ್ವ , ಡಾ. ಜನಾರ್ದನ ಭಟ್( ಫೋಟೋಗಳಿಗೆ ಇಂಗ್ಲೀಷಿನಲ್ಲಿ ಅಡಿಬರಹ ಬರೆದಿದ್ದಾರೆ), ಡಾ.ವೈ ಎನ್. ಶೆಟ್ಟಿ , ಡಾ. ವೆಂಕಟರಾಜ ಪುಣಿಂಚತ್ತಾಯ , ಕುಮಾರ ಸ್ವಾಮಿ, ಡಾ.ಸುಶೀಲಾ ಉಪಾಧ್ಯಾಯ , ಬಾಬು ಶಿವ ಪೂಜಾರಿ , ಡಾ ,ಲಕ್ಷ್ಮೀ ಜಿ ಪ್ರಸಾದ್ ( ಆರು ಲೇಖನಗಳು ಮತ್ತು 1435 ಬೂತಗಳ ಪಟ್ಟಿ ಗ್ರಂಥಕ್ಕಾಗಿ ಒದಗಿಸಿದ್ದಾರೆ).

ವೇ.ಮೂ .ಕಮಲಾದೇವಿ ಪ್ರಸಾದ ಆಸ್ರಣ್ಣ , ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ಟ , ವಿದ್ವಾನ್ ಕುಮಾರ ಗುರು ತಂತ್ರಿ , ವೇ.ಮೂ . ಕೇಂಜ ಶ್ರೀಧರ ತಂತ್ರಿ ಅವರ ಲೇಖನಗಳಿವೆ . ಈ ವೈದಿಕ ವಿದ್ವಾಂಸರ ಲೇಖನಗಳನ್ನು ಬೂತಾರಾಧನಾ ವಿಭಾಗವನ್ನು ವೈದಿಕರು ಸ್ವೀಕರಿಸಿದ ವಿಧಾನವನ್ನು ಗ್ರಹಿಸಲು ಆಸಕ್ತರ ಕುತೂಹಲಕ್ಕಾಗಿ ಸೇರಿಸಿಕೊಳ್ಳಲಾಗಿದೆ .

ಕೆ.ಎಲ್.ಕುಂಡಂತಾಯ ಅವರು ಗ್ರಂಥದ ಸಂಪಾದಕನಾಗಿ ಗ್ರಂಥದ ಪ್ರಸ್ತಾವನೆ : ‘ನಡುವಣ ಲೋಕದ ನಡೆಯಲ್ಲಿ’ , ಹದಿಮೂರು ಕಲಾವಿದರ ಸಂದರ್ಶನ , ಮೂರು ಲೇಖನಗಳು ಹಾಗೂ ಪಾರಿಭಾಷಿಕ ಪದಗಳ ಸಂಗ್ರಹ ಮತ್ತು ಕಟಿಬಯಿರೂಪ ವಿಭಾಗಕ್ಕೆ ಉಭಯ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚಿನ ಅಗತ್ಯ ಫೋಟೋಗಳ ಸಂಗ್ರಹ . ಇಡೀ ಗ್ರಂಥದ ಸಂಯೋಜನೆಯ ಕಾರ್ಯ ನಿರ್ವಹಿಸಿದ್ದಾರೆ .

ಡಾ.ಲಕ್ಷ್ಮೀ ಜಿ ಪ್ರಸಾದ ಬರೆದಿರುವ ಬ್ರಾಹ್ಮಣ ಭೂತಗಳು , ಮುಸ್ಲಿಂ ಭೂತಗಳು,ಕುಲೆ ಭೂತಗಳು , ಕನ್ನಡ ಭೂತಗಳು ಹನುಮಂತ ಕೋಲ , ಸರ್ಪಕೋಲ ಎಂಬ ಆರು ಲೇಖನಗಳು ಹಾಗೂ ಇತರ ವಿದ್ವಾಂಸರ ಅಪೂರ್ವ ಲೇಖನಗಳಿವೆ . 200ಕ್ಕೂ ಹೆಚ್ಚು ಪಾರಿಭಾಷಿಕ ಶಬ್ದಗಳ ದಾಖಲಾತಿ ಇದೆ .

ಮುಂಬಯಿಯ ಎಚ್ ಬಿ ಎಲ್ ರಾವ್ ಅವರು  ಸಾಹಿತ್ಯ ಬಳಗದ ಮೂಲಕ ಈ ಗ್ರಂಥವನ್ನು ಪ್ರಕಟಿಸುವ ಸಾಹಸ ಮೆರೆದಿದ್ದಾರೆ. ಆಕರ್ಷಕ ಮುಖಪುಟ , ಪುಟವಿನ್ಯಾಸ , ಪುಸ್ತಕದ ಸುಂದರ ಸಂಯೋಜನೆ ಅದ್ಭುತ . ನಿರ್ವಹಿಸಿದ ಕಲ್ಲೂರು ನಾಗೇಶ್ ಮತ್ತೊಮ್ಮೆತಮ್ಮ ಪ್ರೌಡಿಮೆ ಪ್ರದರ್ಶಿಸಿದ್ದಾರೆ .
 
ಬೂತ (ದೈವ) ಆರಾಧನಾ ವಿಭಾಗದ ಆಸಕ್ತರಿಗೆ, ಗೌರವವುಳ್ಳವರಿಗೆ, ಅಧ್ಯಯನ ವಿದ್ಯಾರ್ಥಿಗಳಿಗೆ ಈ ಗ್ರಂಥ ಬೂತಾರಾಧನಾಕ್ಷೇತ್ರದ ಒಂದು ಆಯಾಮದ ವಿವರಣೆಯನ್ನು, ಕಾಲ – ಸಂದರ್ಭ – ಮನೋಧರ್ಮಗಳನ್ನು ಆಧರಿಸಿಸಹಜವಾಗಿ ಸಂಭವಿಸುವ   ಬದಲಾವಣೆಯ ಹಂತಗಳನ್ನು ತಿಳಿಸುತ್ತದೆ </abstract>
  <subject>
    <topic>brahmana bhutagalu ಬ್ರಾಹ್ಮಣ ಬೂತಗಳು (ದೈವ)</topic>
  </subject>
  <subject>
    <topic> muslim bhutagalu  ಮುಸ್ಲಿಂ ಬೂತಗಳು (ದೈವ)</topic>
  </subject>
  <subject>
    <topic>kule bhutagalu ,ಕುಲೆ ಬೂತಗಳು (ದೈವ)</topic>
  </subject>
  <subject>
    <topic/>
  </subject>
  <subject>
    <topic> hanumata kola ಹನುಮಂತ ಕೋಲ</topic>
  </subject>
  <subject>
    <topic>sarpa kola  ಸರ್ಪಕೋಲ</topic>
  </subject>
  <subject>
    <topic> daiva worship, Devil worship</topic>
  </subject>
  <classification authority="ddc">398.2K RAVA</classification>
  <recordInfo>
    <recordContentSource authority="marcorg"/>
    <recordCreationDate encoding="marc">210210</recordCreationDate>
    <recordChangeDate encoding="iso8601">20240515165630.0</recordChangeDate>
  </recordInfo>
</mods>
