| 000 | 03731nam a2200217Ia 4500 | ||
|---|---|---|---|
| 003 | OSt | ||
| 005 | 20241009092829.0 | ||
| 008 | 210210b2001 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.2 AKSC | ||
| 100 |
_aAKSHARA (K V). _dಅಕ್ಷರ ಕೆ.ವಿ. _9181889 |
||
| 245 |
_aChurikatte arthat Kallyanapura. _bಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ |
||
| 260 |
_aSagara _bAkshara Prakashana _c2001 |
||
| 300 | _a68 | ||
| 520 | _aಈ ಊರಿಗೆ ಎರಡು ಹೆಸರು. ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ. ಬಸ್ಸಿನ ಬೋರ್ಡಿನ ಮೇಲೆ ಕಲ್ಯಾಣಪುರ… ಯಾಕೆ ಹೀಗೆ ಅನ್ನುತ್ತೀರಾ? ಅದಕ್ಕೆ ಒಂದು ದೊಡ್ಡ ಪುರಾಣವೇ ಇದೆ. ಈ ಊರಿನ ಮೂಲ ದೇವರು ಶಂಭುಲಿಂಗೇಶ್ವರ. ಈಗ ನೂರಾರು ವರ್ಷಗಳ ಹಿಂದೆ ಆ ಶಂಭುಲಿಂಗೇಶ್ವರನ ಒಂದು ಗಣ ಈ ಕಟ್ಟೆಯಮೇಲೇ ಸ್ಥಾಪನೆಯಾಗಿತ್ತಂತೆ. ಆಗ ಜನರೆಲ್ಲ ಕೋಳಿ ಕುರಿ ತಂದು ಅದನ್ನು ಹರಿತವಾದ ಚೂರಿಯಲ್ಲಿ ಸೀಳಿ ಆ ಗಣಕ್ಕೆ ಬಲಿ ಕೊಡುತ್ತಿದ್ದರಂತೆ. ಆಮೇಲೆ ಬ್ರಿಟಿಷರ ಕಾಲದಲ್ಲಿ ಕುದುರೆಯ ಮೇಲೆ ಬಂದು ಒಬ್ಬ ಕಲೆಕ್ಟರನಿಗೆ ಇಲ್ಲೇ ಹಾದಿ ತಪ್ಪಿತು ಅನ್ನೋ ಕಾರಣಕ್ಕೆ ಆತ ಇಲ್ಲಿ ಒಂದು ಕೈಮರ ಹಾಕಿಸಿದನಂತೆ. ಸರಿ, ಗಣಕ್ಕೆ ಮೈಲಿಗೆ ಆಯಿತು ಅಂತ ಊರಿನವರು ಆ ಗಣವನ್ನು ಎತ್ತಿಕೊಂಡು ಹೋಗಿ ಈಗ ಊರನಡುವೆಯೇ ಇರುವ ಶಂಭುಲಿಂಗನ ಗುಡಿಯ ಬದಿಗೆ ನಿಲ್ಲಿಸಿದರಂತೆ. ಆಮೇಲೆ ಊರು ಆ ಕಡೆಗೇ ಬೆಳೆಯುತ್ತ ಹೋಯಿತು; ಶಂಭುಲಿಂಗನ ಗುಡಿ ಊರಿನ ನಟ್ಟನಡುವಿಗೆ ಆಯಿತು. ಊರು ಬೆಳೆದ ಹಾಗೆ ಇತಿಹಾಸವೂ ಬೆಲೀತು; ಸಾತಂತ್ರ್ಯ ಬಂತು. ಆಗ ಊರಿನವರಿಗೆ ಈ ಚೂರಿಕಟ್ಟೆ ಅನ್ನೋ ಹೆಸರು ಅಪಶಕುನ ಅನ್ನೋ ಹಾಗೆ ಕಂಡಿದ್ದರಿಂದ ದೊಡ್ಡದೊಡ್ಡವರೆಲ್ಲಾ ಸೇರಿ ಸರ್ಕಾರಕ್ಕೆ ಒತ್ತಾಯ ಮಾಡಿ ಈ ಊರಿನ ಹೆಸರನ್ನು ಕಲ್ಯಾಣಪುರ ಅಂತ ಬದಲು ಮಾಡಿಸಿದರು. ಆದರೆ, ಚೂರಿಕಟ್ಟೆ ಅನ್ನೋ ಹೆಸರು ಅಳಿಸಲೇ ಇಲ್ಲ… ಈಗ ಒಂದೆರಡು ವರ್ಷದ ಈಚೆಗೆ ಈ ಹೆಸರಿಗೆ ಇನ್ನೋಂದು ಅರ್ಥ ಬರಲಿಕ್ಕೆ ಶುರು ಆಗಿದೆ. ಪ್ರತಿವರ್ಷ ಶಂಭುಲಿಂಗೇಶ್ವರ ಜಾತ್ರೆ ಶುರು ಆಗಬೇಕು, ಅಷ್ಟು ಹೊತ್ತಿಗೆ ಇಲ್ಲಿ ಹಿಂದು ಮುಸ್ಲಿಂ ಗಲಾಟೆ ಶುರು; ಹೆಣ ಬೀಳೋದಕ್ಕೆ ಆರಂಭ. ಇವರು ಅವರಿಗೆ ಚೂರಿ ಹಾಕೋದು, ಅವರು ಇವರನ್ನು ತಿವಿಯೋದು. ಒಟ್ಟಿನಲ್ಲಿ ಹೆಣ ಕಾಯೋದು ನಮ್ಮ ಹಣೆಬರಹ. | ||
| 650 |
_aKannada Nataka _9181890 |
||
| 690 |
_aKannada Drama _9181891 |
||
| 906 | _a056544 | ||
| 942 |
_2ddc _cBK |
||
| 999 |
_c104043 _d104043 |
||