| 000 | 03534nam a2200217Ia 4500 | ||
|---|---|---|---|
| 003 | OSt | ||
| 005 | 20251111151849.0 | ||
| 008 | 210210b2017 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.308 PRAH | ||
| 100 |
_aPRAJAVANI _dಪ್ರಜಾವಾಣಿ _9245044 |
||
| 245 |
_aHonna kanaja samputa 1 sannakathegala sankalana _bಹೊನ್ನ ಕಣಜ ಸಂಪುಟ 1 : ಸಣ್ಣಕಥೆಗಳ ಸಂಕಲನ |
||
| 260 |
_aBengaluru _b- _c2017 |
||
| 300 | _avi,484 | ||
| 520 | _aಹೊನ್ನ ಕಣಜ ಹೊಸಗನ್ನಡ ಸಾಹಿತ್ಯದ ಸಣ್ಣಕಥೆಗಳ ಪರಂಪರೆಗೆ `ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ನೀಡಿರುವ ಕೊಡುಗೆ ಅಸಾಧಾರಣ. ದೀಪಾವಳಿ ವಿಶೇಷಾಂಕಕ್ಕೂ ಕನ್ನಡದ ಸಣ್ಣಕಥೆಗಳಿಗೂ ಕರುಳುಬಳ್ಳಿಯ ಸಂಬಂಧವಿದೆ ಅನ್ನಿಸುವಂತೆ ಪ್ರಮುಖ ಕಥೆಗಾರರ ಅನನ್ಯ ಕಥೆಗಳು ವಿಶೇಷಾಂಕಗಳ ಒಡಲಲ್ಲಿ ಅರಳಿವೆ. ದೀಪಾವಳಿ ಕಥಾಸ್ಪರ್ಧೆಗೆ ಅರವತ್ತು ವರ್ಷಗಳು ತುಂಬಿದ ಈ ಸಂದರ್ಭದಲ್ಲಿ, ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳನ್ನು ಮೂರು ಸಂಪುಟಗಳಲ್ಲಿ ಸಂಕಲನ ಮಾಡಿ ಕನ್ನಡ ಓದುಗರ ಕೈಗಿಡುವುದು ..ಪ್ರಜಾವಾಣಿ ಪ್ರಕಾಶನ.. ದ ಮತ್ತು ಪ್ರಜಾವಾಣಿಯ ಸಂಪಾದಕರಾದ ಕೆ. ಎನ್. ಶಾಂತ ಕುಮಾರ್ ಅವರ ಕನಸಿನ ಯೋಜನೆ. ಸಣ್ಣಕಥೆಗಳ ಈ "ಹೊನ್ನ ಕಣಜ"ದ ಪ್ರಥಮ ಸಂಪುಟ ಪ್ರಕಟವಾಗಿದೆ. ಪ್ರಜಾವಾಣಿ ದೀಪಾವಳಿ ವಿಶೇಷಾಂಕದ ಈ ಕಥನ ಕಾಲ, ಕಾಲದ ಕಥನವೂ ಆಗಿದೆ ಎಂದರೆ ಅತಿಶಯೋಕ್ತಿ ಅಲ್ಲ. ವಸ್ತು ಮತ್ತು ವಿನ್ಯಾಸದಲ್ಲಿ ಅದು ಕಾಲದ ಜೊತೆ ಹೆಜ್ಜೆ ಹಾಕಿದೆ. ಹೊಸಗನ್ನಡ ಸಾಹಿತ್ಯದ ಎಲ್ಲ ಚಳುವಳಿಗಳ ಆಶಯಗಳು ಇಲ್ಲಿ ಅಭಿವ್ಯಕ್ತಿ ಪಡೆದಿವೆ. ನೂರಾರು ಪ್ರತಿಭಾವಂತರು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಅತ್ಯುತ್ತಮ ಸಾಹಿತಿಗಳು ತೀರ್ಪುಗಾರರಾಗಿ ಪಾಲ್ಗೊಂಡಿದ್ದಾರೆ. ಕನ್ನಡ ನಾಡಿನ ಸಮಸ್ತ ಸೃಜನಶೀಲ ಬರಹಗಾರರನ್ನು ಒಳಗೊಳ್ಳುವ ವಾರ್ಷಿಕ ಸಾಹಿತ್ಯ ಕೈಂಕರ್ಯವಾಗಿ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ಮುಂದುವರೆಯುತ್ತಿದೆ. ಅದರ ಅದ್ಭುತ ಬಹುಮಾನಿತ ಕಥೆಗಳು ..ಹೊನ್ನ ಕಣಜ.. ಸಂಪುಟಗಳಲ್ಲಿ ಸೇರಲಿವೆ. | ||
| 650 |
_aದೀಪಾವಳಿ ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಸಣ್ಣಕಥೆಗಳ ಸಂಕಲನ _9245045 |
||
| 690 |
_aKannada Fiction _9245046 |
||
| 906 | _a071616 | ||
| 942 |
_2ddc _cBK |
||
| 999 |
_c121381 _d121381 |
||